ಉತ್ತರ ಪ್ರದೇಶ ತಂಡದ ಎದುರು ಇಲ್ಲಿ ನಡೆಯುತ್ತಿರುವ ರಣಜಿ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಅವರು 90 ರನ್ ಗಳಿಸಿ, ಕ್ರೀಸ್ನಲ್ಲಿದ್ದಾರೆ. ಅವರಿಗೆ ಇದು ಪದಾರ್ಪಣೆಯ ರಣಜಿ ಋತು. 15 ದಿನಗಳ ಹಿಂದೆ ಪುಣೆಯಲ್ಲಿ ನಡೆದಿದ್ದ ಮಹಾರಾಷ್ಟ್ರ ಎದುರಿನ ಪಂದ್ಯದಲ್ಲಿ ಅವರು ಆಡಿದ್ದರು. ಆನಂತರ ಕೆ.ಎಲ್. ರಾಹುಲ್ ತಂಡಕ್ಕೆ ಮರಳಿದ್ದರಿಂದ ನಿಶ್ಚಲ್ ಸಿ.ಕೆ. ನಾಯ್ಡು ಟ್ರೋಫಿ ಟೂರ್ನಿಯಲ್ಲಿ ಆಡಲು ತೆರಳಿದ್ದರು. ಆದ್ದರಿಂದ ಅವರು ಆಲೂರಿನಲ್ಲಿ ನಡೆದಿದ್ದ ದೆಹಲಿ ಎದುರಿನ ಪಂದ್ಯದಲ್ಲಿ ಇರಲಿಲ್ಲ.