ಈ ಪ್ರತಿಷ್ಠಿತ ಪ್ರಶಸ್ತಿಗಳು ಮತ್ತು ಬಹುಮಾನಗಳನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುನೀತ್ ರಾಜಕುಮಾರ್ ವಿತರಿಸಿದರು. ಬೆಂಗಳೂರಿನ ಟಿಸಿಎಸ್ ಆಪರೇಷನ್ನ ಉಪಾಧ್ಯಕ್ಷ ಮತ್ತು ಮುಖ್ಯಸ್ಥರಾದ ನಾಗರಾಜ್ ಇಜಾರಿ ಮತ್ತು ಕರ್ನಾಟಕ ಸರ್ಕಾರದ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಜೇತರಿಗೆ ಅಭಿನಂದನೆ ಸಲ್ಲಿಸಿದರು. ಎಲ್ಲಾ ಫೈನಲಿಸ್ಟ್ಗಳು ಪ್ರಶಸ್ತಿಗಳ ಜೊತೆಗೆ ಟಿಸಿಎಸ್ನಿಂದ 10,000 ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಪಡೆದರು.