ಆಸ್ಪತ್ರೆಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ರೋಗಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಹೆರಿಗೆ ವಾರ್ಡ್ ಮತ್ತು ಹೊರ ರೋಗಿಗಳ ವಿಭಾಗಕ್ಕೆ ತೆರಳಿದ ಅವರು, ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯಾ? ಸಮಯಕ್ಕೆ ಸರಿಯಾಗಿ ವೈದ್ಯರು ಭೇಟಿ ನೀಡುತ್ತಿದ್ದಾರಾ? ಎಂದು ರೋಗಿಗಳನ್ನು ಪ್ರಶ್ನಿಸಿ ಮಾಹಿತಿ ಪಡೆದುಕೊಂಡರು.