ಮುಖಂಡ ಟಿ.ಎಂ.ಉಮೇಶ್ ಮಾತನಾಡಿ, ‘ಬಾಳೆಹೊನ್ನೂರು ಪಟ್ಟಣಕ್ಕೆ ಶಾಸಕ ಜೀವರಾಜ್ ಅವಧಿ ಯಲ್ಲಿ ಕೋಟ್ಯಂತರ ರೂಪಾಯಿಗಳ ಕಾಮಗಾರಿ ನಡೆದಿದೆ. ಬಾಳೆಹೊನ್ನೂರಿನ ಮುಖ್ಯ ರಸ್ತೆ, ಹಲಸೂರು ರಸ್ತೆ ಕಾಂಕ್ರೀಟಿಕರಣ ಸೇರಿದಂತೆ ಹತ್ತು ಹಲವು ಕಾಮಗಾರಿಗಳನ್ನು ಇಲ್ಲಿ ಕೈಗೊಳ್ಳಲಾಗಿದೆ.’ ಎಂದರು. ಹೋಬಳಿ ಅಧ್ಯಕ್ಷ ಕೆ.ಕೆ.ವೆಂಕಟೇಶ್, ವಕ್ತಾರ ಬಿ.ಜಗದೀಶ್ಚಂದ್ರ, ಕೆ.ಟಿ.ವೆಂಕಟೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪುಣ್ಯಪಾಲ್ ಇದ್ದರು.