‘ಫೆಬ್ರುವರಿ ಅಂತ್ಯಕ್ಕೆ ಬಜೆಟ್ ಮಂಡನೆ ಮಾಡಲಾಗುವುದು. ವಿಶ್ವ ಕನ್ನಡ ಸಮ್ಮೇಳನ ಡಿಸೆಂಬರ್ನಲ್ಲಿ ನಡೆಯಬೇಕಿತ್ತು. ಆದರೆ, ಈ ಮಧ್ಯೆ ಕನ್ನಡ ಸಾಹಿತ್ಯ ಸಮ್ಮೇಳನ ಬಂದಿರುವುದರಿಂದ ತಡವಾಗಿದೆ. ಸಾಹಿತ್ಯ ಸಮ್ಮೇಳನ ಮುಗಿದ ಮೇಲೆ ವಿಶ್ವ ಕನ್ನಡ ಸಮ್ಮೇಳನದ ದಿನಾಂಕ ನಿಗದಿಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.