ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಹೆಸರಲ್ಲಿ ನಿತ್ಯ ಪೂಜೆ

Last Updated 18 ನವೆಂಬರ್ 2017, 8:38 IST
ಅಕ್ಷರ ಗಾತ್ರ

ಯಲ್ಲಾಪುರ: ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಶುಕ್ರವಾರ ತಾಲ್ಲೂಕಿನ ಮಾಗೋಡ ಚಂದಗುಳಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ 7-40 ಗಂಟೆಗೆ ತಮ್ಮ ಕೆಲವೇ ಕೆಲವು ಆಪ್ತರೊಂದಿಗೆ ಚಂದಗುಳಿ ಗಂಟೆ ಗಣಪತಿ ದೇವಸ್ಥಾನ ಎಂದೇ ಪ್ರಸಿದ್ಧಿ ಹೊಂದಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತಲುಪಿದ ದೇವೇಗೌಡ ಅವರು, ಸಿದ್ಧಿವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಒಳಿತಿಗೆ ದೊಡ್ಡ ಗಂಟೆಯೊಂದನ್ನು ನೀಡುವುದರ ಮೂಲಕ ಹರಕೆಯನ್ನು ತೀರಿಸಿದರು.

ತಮ್ಮ ಪುತ್ರ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿನಲ್ಲಿ ಮೇ 5ರವರೆಗೆ ದೇವಸ್ಥಾನದ ಸಿದ್ಧಿವಿನಾಯಕನಿಗೆ ನಿತ್ಯ ಪೂಜೆ ಸಲ್ಲಿಸುವಂತೆ ಅರ್ಚಕರಲ್ಲಿ ಕೇಳಿಕೊಂಡು ಪೂಜೆಗೆ ತಗಲುವ ವೆಚ್ಚವನ್ನು ದೇವಸ್ಥಾನದ ಟ್ರಸ್ಟಿ ಹಾಗೂ ಅರ್ಚಕರಿಗೆ ಹಸ್ತಾಂತರಿಸಿದರು.

ನಂತರ ದೇವಸ್ಥಾನದ ಟ್ರಸ್ಟಿಗಳು ಹಾಗೂ ನಂದೊಳ್ಳಿ ಗ್ರಾಮ ಪಂಚಾಯ್ತಿ ಪ್ರಮುಖರೊಂದಿಗೆ ಸಭೆ ನಡೆಸಿದ ಮಾಜಿ ಪ್ರಧಾನಿ, ನಿರ್ಮಾಣವಾಗುತ್ತಿರುವ ದೇವಸ್ಥಾನದ ನೂತನ ಕಟ್ಟಡದ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ ಶಕ್ತಿ ಗಣಪತಿ ದೇವಸ್ಥಾನವೆಂದೇ ಪ್ರಖ್ಯಾತಿ ಪಡೆದಿರುವ ಈ ದೇವಸ್ಥಾನದ ಮಹಿಮೆಯನ್ನು ಆಲಿಸಿದ ಅವರು ತಾವು ಈ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಗೆ ಕಾರಣರಾದವರ ಕುರಿತು ಟ್ರಸ್ಟಿಗಳಿಗೆ ತಿಳಿಸಿದರು. ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ ದೇವೇಗೌಡ ಅವರನ್ನು ಗೌರವಿಸಲಾಯಿತು.

ಚಂದುಗುಳಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡುವುದು ಸೇರಿದಂತೆ ಮಧ್ಯಾಹ್ನ ಉಮ್ಮಚಗಿ ಬಳಿಯ ಜ್ಯೋತಿಷಿ ಎಂ ಟಿ ಹೆಗಡೆ ಬೆಳಗುಂದ್ಲಿ ಅವರ ಮನೆಗೆ ಭೇಟಿ ನೀಡುವುದಕ್ಕಾಗಿ ಯಲ್ಲಾಪುರಕ್ಕೆ ಗುರುವಾರ ಸಂಜೆ ಆಗಮಿಸಿದ ದೇವೇಗೌಡ ಅವರು ಪಟ್ಟಣದ ಅರಣ್ಯ ಇಲಾಖೆ ಪರಿವೀಕ್ಷಣಾ ಮಂದಿರದಲ್ಲಿ ವಾಸ್ತವ್ಯ ಮಾಡಿದ್ದರು.

ಈ ಸಂದರ್ಭದಲ್ಲಿ ಯಲ್ಲಾಪುರ ತಹಶೀಲ್ದಾರ್ ಡಿ ಜಿ ಹೆಗಡೆ, ಪೊಲೀಸ್ ನಿರೀಕ್ಷಕ ಡಾ ಮಂಜುನಾಥ್ ನಾಯಕ, ಪಿಎಸ್ಐ ಲಕ್ಕಪ್ಪ ನಾಯ್ಕ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ ಆರ್ ನಾಯ್ಕ, ಯಲ್ಲಾಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್ ಉಸ್ತುವಾರಿ ರವೀಂದ್ರನಾಥ ನಾಯ್ಕ, ಯಲ್ಲಾಪುರ ಪಟ್ಟಣ ಪಂಚಾಯತ ಸದಸ್ಯ ರವಿಚಂದ್ರ ನಾಯ್ಕ, ಚಂದಗುಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಪ್ಪು ಆಚಾರಿ ನಂದೊಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಎಂ ಎನ್ ಭಟ್, ಪಿಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್. ಭಟ್, ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ಪಿ. ಭಟ್ಟ ಗುಂಡ್ಕಲ್, ಮುಂಡಗೋಡ ಜೆಡಿಎಸ್ ಪ್ರಮುಖ ಅರುಣ ಗೋಂದಳಿ ಇದ್ದರು.ದೇವೇಗೌಡರ ಕುಟುಂಬದ ಹೆಸರಲ್ಲಿ ಅರ್ಚಕರಾದ ಗಣಪತಿ ಭಟ್ ಹಾಗೂ ಗಣೇಶ್ ಭಟ್ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT