ತಾಲ್ಲೂಕಿನಲ್ಲಿ ಮೂಲಂಗಿ, ಕ್ಯಾರೆಟ್ ಮುಂತಾದ ತರಕಾರಿಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಈ ತರಕಾರಿಗಳನ್ನು ಕಿತ್ತ ಬಳಿಕ ತೊಳೆಯುವುದು ಸಮಸ್ಯೆಯಾಗಿತ್ತು. ಹತ್ತಿರದಲ್ಲಿ ನೀರು ಸಿಗುತ್ತಿರಲಿಲ್ಲ. ಆದ್ದರಿಂದ ಕ್ಯಾರೆಟ್ ಮತ್ತು ಮೂಲಂಗಿಯನ್ನು ಟೆಂಪೋದಲ್ಲಿ ತುಂಬಿಕೊಂಡು ತೊಳೆಯಲು ನೀರಿನ ಲಭ್ಯತೆಯಿರುವ ದೂರದ ಪ್ರದೇಶಕ್ಕೆ ಹೋಗಬೇಕಾಗಿತ್ತು. ಅದಕ್ಕೆ ಸಾಗಾಣಿಕೆ ವೆಚ್ಚ ಹೆಚ್ಚುತ್ತಿತ್ತು. ಈಗ ಆ ಕಷ್ಟ ತಪ್ಪಿದೆ. ತೋಟಗಳ ಸಮೀಪದ ಕೆರೆ, ಕುಂಟೆಗಳಲ್ಲಿ ತರಕಾರಿ ತೊಳೆಯಲಾಗುತ್ತಿದೆ. ಸಾಕಷ್ಟು ನೀರಿನ ಲಭ್ಯತೆ ಇರುವುದರಿಂದ ತರಕಾರಿ ಹಾಗೂ ಸೊಪ್ಪನ್ನು ಸ್ವಚ್ಛಗೊಳಿಸುವುದು ಸುಲಭವಾಗಿದೆ.