ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಿಪುರದ ರಾಮಯ್ಯನ ಕೆರೆಯಲ್ಲಿ ಶನಿವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋಗಿದ್ದ ನಾಲ್ಕು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಾಲತಿ (30), ಅವರ ಪುತ್ರಿ ಪೂರ್ಣಿಮಾ (10), ಅನು (14) ಹಾಗೂ ನಮ್ರತಾ (11) ಮೃತರು. ಬಟ್ಟೆ ತೊಳೆಯುತ್ತಿದ್ದ ವೇಳೆ ಒಬ್ಬರು ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಉಳಿದ ಮೂರೂ ಮಂದಿ ನೀರು ಪಾಲಾಗಿದ್ದಾರೆ. ಶವಗಳನ್ನು ನೀರಿನಿಂದ ಹೊರ ತೆಗೆಯಲಾಗಿದೆ.