ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌನ್ಸಿಲ್‌ ಸಭೆಯಲ್ಲಿ ಹೊಡೆದಾಟ

Last Updated 18 ನವೆಂಬರ್ 2017, 19:30 IST
ಅಕ್ಷರ ಗಾತ್ರ

ತಿರುವನಂತಪುರ: ಹೈಮಾಸ್ಟ್‌ ದೀಪ ಅಳವಡಿಕೆ ಸಂಬಂಧ ನಗರಪಾಲಿಕೆಯಲ್ಲಿ ಶನಿವಾರ ನಡೆದ ಚರ್ಚೆಯ ವೇಳೆ, ಸಿಪಿಎಂ ಮತ್ತು ಬಿಜೆಪಿ ಸದಸ್ಯರ ನಡುವೆ ಹೊಡೆದಾಟ ನಡೆದಿದ್ದು, ಮೇಯರ್‌ ವಿ.ಕೆ.ಪ್ರಶಾಂತ್, ಅವರ ಸಹಾಯಕ ಹಾಗೂ ಪಾಲಿಕೆಯ ನಾಲ್ವರು ಸದಸ್ಯರು ಗಾಯಗೊಂಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌನ್ಸಿಲ್‌ ಸಭೆಯಲ್ಲಿ ಗದ್ದಲ ಉಂಟಾಗಿರುವುದು ಸಿ.ಸಿ.ಟಿ.ವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಮೇಯರ್‌ ಸಭಾಂಗಣದಿಂದ ಹೊರಬಂದು ಮೊದಲ ಮಹಡಿಯಲ್ಲಿದ್ದ ತಮ್ಮ ಕೊಠಡಿಗೆ ತೆರಳುವ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಕೆಳಗೆ ಬಿದ್ದಿದ್ದಾರೆ. ಇದರಿಂದ ಅವರ ತಲೆಗೆ ಪೆಟ್ಟು ಬಿದ್ದಿದೆ.

‘ಮೇಯರ್‌ ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ಸದಸ್ಯರಾದ ಸಿಪಿಎಂನ ರಜಿಯಾ ಬೇಗಂ, ಸಿಂಧು, ಬಿಜೆಪಿಯ ಬೀನಾ, ಲಕ್ಷ್ಮಿ ಹಾಗೂ ಮೇಯರ್‌ ಅವರ ಸಹಾಯಕ ಬಿ.ಮೋಹನ್‌ ಗಾಯಗೊಂಡವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT