42 ದೇಶಗಳಿಂದ 600 ಪ್ರತಿನಿಧಿಗಳು ಮತ್ತು ದೇಶದ ವಿವಿಧೆಡೆಯಿಂದ ಸುಮಾರು 15,000 ಮಂದಿ ಬಾಬಾ ಅನುಯಾಯಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಪಾಲ ನರಸಿಂಹನ್ ಉದ್ಘಾಟಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಸಂಸ್ಥೆಯ ರಾಜ್ಯ ಹೆಚ್ಚುವರಿ ಸಂಚಾಲಕ ಡಾ.ಉದಯ ಧರ್ಮಸ್ಥಳ ತಿಳಿಸಿದ್ದಾರೆ.