ಆನೇಕಲ್: ತಾಲ್ಲೂಕಿನ ಗಡಿಭಾಗ ತಮಿಳುನಾಡಿನ ಥಳಿ ಸಮೀಪದ ಶಿವನಹಳ್ಳಿ ಬಳಿ ಒಂಟಿ ಸಲಗವೊಂದು ದಾಳಿ ನಡೆಸಿದ್ದರಿಂದ ಅರಣ್ಯ ಇಲಾಖೆಯ ಮೂರು ಮಂದಿ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಬಳಿಕ ದು ಮೇಯುತ್ತಿದ್ದ ದನಗಳ ಮೇಲೆ ದಾಳಿ ನಡೆಸಿದ್ದರಿಂದ ಹಸುವೊಂದು ಮೃತಪಟ್ಟಿತು.
ಕಾಡಿನಿಂದ ಹೊರಬಂದ ಒಂಟಿ ಸಲಗವು ಶಿವನಹಳ್ಳಿ ಬಳಿ ರೈತರು ಬೆಳೆದಿದ್ದ ರಾಗಿಬೆಳೆ ನಾಶಗೊಳಿಸಿತು. ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಒಂಟಿ ಸಲಗವನ್ನು ಕಾಡಿಗೆ ಓಡಿಸಲು ಹರಸಾಹಸ ಮಾಡಿದರು.
ಆಗ ಅದು ಮೂರು ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಒಬ್ಬ ಸ್ಥಳೀಯ ವ್ಯಕ್ತಿಯ ಮೇಲೆ ದಾಳಿ ನಡೆಸಿತು. ಗಾಯಾಳುಗಳು ಥಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.