ಕಲ್ಲೇಶ್ ಗೌಡ (26), ಸತೀಶ್ (27) ಹಾಗೂ ತಿಪ್ಪೇಸ್ವಾಮಿ (23) ಮೃತಪಟ್ಟವರು. ಸಂಜೆ 7ರ ಸುಮಾರಿಗೆ ಬೈಕ್ನಲ್ಲಿ ತೆರಳುತ್ತಿದ್ದ ಕಲ್ಲೇಶ್ ಗೌಡ ಎಂಬವರು ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇದನ್ನು ನೋಡಿದ ಖಾಸಗಿ ಬಸ್ನಲ್ಲಿದ್ದ ಪ್ರಯಾಣಿಕರು ಬಸ್ ನಿಲ್ಲಿಸಿ ಗಾಯಾಳುವನ್ನು ಉಪಚರಿಸಲು ಮುಂದಾಗಿದ್ದಾರೆ. ಈ ಸಂದರ್ಭ ದಾವಣಗೆರೆ ಕಡೆಯಿಂದ ವೇಗವಾಗಿ ಬಂದ ಖಾಸಗಿ ಬಸ್ ಜನರ ಮೇಲೆಯೇ ಹರಿದಿದೆ. ಕೆಲವರು ತಪ್ಪಿಸಿಕೊಂಡಿದ್ದಾರೆ. ಬೈಕ್ ಸವಾರ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.