ರಾಯಚೂರು: ‘ರಾಯಚೂರು ತಾಲ್ಲೂಕಿಗೆ ನಿರಂತರ ವಿದ್ಯುತ್ ಕಲ್ಪಿಸುವ ವಿಷಯಕ್ಕೆ ಸಂಬಂಧ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಅಧಿವೇಶನದಲ್ಲಿ ಗೊಂದಲದ ಉತ್ತರ ನೀಡಿದ್ದು, ಹೀಗಾಗಿ ವಿದ್ಯುತ್ ಬೇಡಿಕೆ ಈಡೇರಿಸಲು ಒತ್ತಾಯಿಸಿ ನ.27 ರಿಂದ ಯೋಜನೆಯ ಪ್ರಕಾರವೇ ಪಾದಯಾತ್ರೆ ನಡೆಸಲಾಗುವುದು’ ಎಂದು ಶಾಸಕ ತಿಪ್ಪರಾಜು ಹವಾಲ್ದಾರ್ ಹೇಳಿದರು.