‘ದೇಶದ 56 ಗ್ರಾಮೀಣ ಬ್ಯಾಂಕುಗಳಿಂದ 30 ಕೋಟಿಗೂ ಅಧಿಕ ಗ್ರಾಹಕರು ಸೇವೆ ಪಡೆಯುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶ ಸೃಷ್ಟಿಸಲು ಸಣ್ಣ, ಅತಿ ಸಣ್ಣ ರೈತರಿಗೆ, ಗ್ರಾಮೀಣ ಕರಕುಶಲಕರ್ಮಿಗಳಿಗೆ, ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುತ್ತಿವೆ. ಪ್ರತಿ ವರ್ಷ
₹10 ಸಾವಿರ ಕೋಟಿ ತೆರಿಗೆ ಪಾವತಿಸುತ್ತಿದ್ದು, ಇವುಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ’ ಎಂದರು.