ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಮಾತನಾಡಿ, ‘ಯುವ ಪೀಳಿಗೆ ಕಾರ್ಯದಕ್ಷತೆ, ಉತ್ತಮ ಚಾರಿತ್ರ್ಯ, ನಿಷ್ಟತೆ ಹೊಂದಿದರೆ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಹಾಗೂ ಭ್ರಷ್ಟಾಚಾರವನ್ನು ಹೋಗಲಾಡಿಸಲು ಜನರ ಸಹಕಾರ ಅತ್ಯಗತ್ಯ’ ಎಂದರು. ಉದ್ಯಮಿ ಭುವನೇಂದ್ರ ಕಿದಿಯೂರು, ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಉಪ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರತಿ ಉಪಸ್ಥಿತರಿದ್ದರು.