ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಂ.ಬಂಡಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ದೇವರ ಕಾರ್ಯಕ್ರಮ ಉದ್ಘಾಟಿಸಿದರು. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಟಿ.ತಳಕೇರಿ, ಜಿಲ್ಲಾ ಬಸವ ಕೇಂದ್ರ ಅಧ್ಯಕ್ಷ ನಾನಾಗೌಡ ಪಾಟೀಲ, ಡಿ.ಆರ್.ಶಹಾ, ಸುಧಾ ಅರಕೇರಿ, ಎ.ಎಸ್.ಗಾಣಿಗೇರ, ಸಿಂದಗಿ ಪೋರವಾಲ, ಬಿ.ಎನ್.ಪಾಟೀಲ ಉಪಸ್ಥಿತರಿದ್ದರು. ಪ್ರಾಚಾರ್ಯೆ ಸುಧಾ ಅರಕೇರಿ ಸ್ವಾಗತಿಸಿದರು. ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.