ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಸರಣಿಯ ವೇಳೆ ಬದಲು

Last Updated 19 ನವೆಂಬರ್ 2017, 20:25 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳ ವೇಳೆಯನ್ನು ಬದಲಾಯಿಸಲು ಬಿಸಿಸಿಐ ನಿರ್ಧರಿಸಿದೆ.

ಮಂಜು ಮತ್ತು ಚಳಿ ವಾತಾವರಣದಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಧರ್ಮಶಾಲಾ ಮತ್ತು ಮೊಹಾಲಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಪಂದ್ಯಗಳು ಮಧ್ಯಾಹ್ನ 1.30ರ ಬದಲಿಗೆ ಬೆಳಿಗ್ಗೆ 11.30ಕ್ಕೆ ಆರಂಭವಾಗಲಿವೆ.

‘ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮತ್ತು ಪಂಜಾಬ್ ಕ್ರಿಕೆಟ್ ಸಂಸ್ಥೆಯ ಪ್ರಮುಖರ ಜೊತೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಬಿಸಿಸಿಐ ಪ್ರಭಾರ ಕಾರ್ಯದರ್ಶಿ ಅಮಿತಾಭ್ ಚೌಧರಿ ತಿಳಿಸಿದರು.

ಧರ್ಮಶಾಲಾದಲ್ಲಿ ಡಿಸೆಂಬರ್‌ 10ರಂದು ಮತ್ತು ಮೊಹಾಲಿಯಲ್ಲಿ ಡಿಸೆಂಬರ್‌ 13ರಂದು ಪಂದ್ಯಗಳು ನಡೆಯಲಿವೆ. ಮೂರನೇ ಪಂದ್ಯ ವಿಶಾಖಪಟ್ಟಣದಲ್ಲಿ ಡಿಸೆಂಬರ್‌ 17ರಂದು 1.30ಕ್ಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT