ಮೈಸೂರು: ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ಜಿಲ್ಲಾಧ್ಯಕ್ಷ ಬೆಳ್ತೂರು ಮಹದೇವ ತಿಳಿಸಿದರು.
ಸದಾಶಿವ ಆಯೋಗ ವರದಿ ಸಲ್ಲಿಸಿ 6 ವರ್ಷ ಕಳೆದಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ವರದಿಯನ್ನು ನಿರ್ಲಕ್ಷಿಸುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು.
ಬೆಳಗಾವಿ ಅಧಿವೇಶನದಲ್ಲಿ ವರದಿಯನ್ನು ಅಂಗೀಕರಿಸಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ದಲಿತ ಮುಖಂಡರಾದ ಎನ್.ಮಂಜುನಾಥ್, ಭೋಜ, ಜೆ.ಮಹದೇವ ಇದ್ದರು.