ಸಮಾರಂಭ ಉದ್ಘಾಟಿಸಿದ ಮಾಜಿ ಶಾಸಕ ಎಚ್.ಸಿ.ಬಸವರಾಜು, ತಾಲ್ಲೂಕಿನಲ್ಲಿ 1967ರಿಂದಲೂ ತಂಬಾಕು ಬೆಳೆಯುತ್ತಿದ್ದು, ರೈತರ ಹಿತ ಕಾಪಾಡಲು 1981ರಲ್ಲಿ ತಂಬಾಕು ಮಂಡಳಿ ಅಸ್ತಿತ್ವಕ್ಕೆ ಬಂದಿದೆ. ಆದರೆ, ಅಂದಿನಿಂದಲೂ ವೈಜ್ಞಾನಿಕ ಬೆಲೆ ನಿಗದಿಯಾಗದಿರುವುದು ಬೇಸರದ ಸಂಗತಿ. ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.