‘ಎಸಿಪಿ, ಕಾನ್ಸ್ಟೆಬಲ್, ಹೋಟೆಲ್ ಮಾಲೀಕ, ಸಿಬ್ಬಂದಿ ಹಾಗೂ ಕೆಲ ಸಾರ್ವಜನಿಕರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದಿದ್ದೇನೆ. ಅದನ್ನು ಆಧರಿಸಿ ಅಂತಿಮ ವರದಿ ಸಿದ್ಧಪಡಿಸಿದ್ದೇನೆ. ಎಸಿಪಿ ಅವರು ಸುಖಾಸುಮ್ಮನೇ ಹೋಟೆಲ್ ಮಾಲೀಕರ ಮೇಲೆ ಹಲ್ಲೆ ನಡೆಸಿ, ತಪ್ಪು ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ತನಿಖಾ ವರದಿಯನ್ನು ಕಮಿಷನರ್ ಅವರಿಗೆ ನೀಡಿದ್ದು, ಅವರೇ ಮುಂದಿನ ಕ್ರಮ ಕೈಗೊಳ್ಳಬೇಕಿದೆ’ ಎಂದು ಡಿಸಿಪಿ ಚೇತನ್ಸಿಂಗ್ ರಾಥೋಡ್ ‘ಪ್ರಜಾವಾಣಿ’ಗೆ ತಿಳಿಸಿದರು.