ಬೆಂಗಳೂರು: ‘ರಾಜರಾಜೇಶ್ವರಿ ನಗರ ವ್ಯಾಪ್ತಿಯ ಎಲ್ಲ ಮನೆಗಳಿಗೂ ಕಾವೇರಿ ನೀರು ಪೂರೈಕೆಯಾಗುತ್ತಿದೆ. ಕ್ಷೇತ್ರದ ಎಲ್ಲ ಬಡಾವಣೆಗಳಲ್ಲಿ ಶುದ್ಧ ನೀರಿನ ಘಟಕ ನಿರ್ಮಿಸಲಾಗಿದೆ’ ಎಂದು ಶಾಸಕ ಮುನಿರತ್ನ ತಿಳಿಸಿದರು.
ಕೆಂಗುಂಟೆಯಲ್ಲಿ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ‘ಅಭಿವೃದ್ಧಿಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದ್ದೇವೆ’ ಎಂದರು.
ಪಾಲಿಕೆ ಸದಸ್ಯೆ ಜಿ.ಡಿ.ತೇಜಸ್ವಿನಿ ಸೀತಾರಾಮಯ್ಯ, ‘ನಮ್ಮ ವಾರ್ಡ್ ವ್ಯಾಪ್ತಿಯಲ್ಲಿನ ಎಲ್ಲ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದೆ. ಒಳಚರಂಡಿ ಕಾಮಗಾರಿಗಳನ್ನೂ ಪೂರ್ಣಗೊಳಿಸಲಾಗಿದೆ’ ಎಂದರು.
ಕೆಂಗುಂಟೆಯಲ್ಲಿ ವಾಸವಿರುವ ಅನೇಕರಿಗೆ ಶಾಸಕ ಮುನಿರತ್ನ ಮನೆಗಳ ಹಕ್ಕುಪತ್ರ ವಿತರಿಸಿದರು. ಎಂ.ಪಿ.ಎಂ. ಬಡಾವಣೆಯಲ್ಲಿ ₹ 1 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು.