ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಉತ್ತರ ಕರ್ನಾಟಕದ ಭಾಗದ ಸಕ್ಕರೆ ಕಾರ್ಖಾನೆಗಳು ಒಂದು ಟನ್ ಕಬ್ಬಿಗೆ ₹ 3,200 ಕೊಡಲು ತೀರ್ಮಾನಿಸಿವೆ. ಆದರೆ ಸರ್ಕಾರವೇ ₹ 2,700 ನಿಗದಿ ಮಾಡುವ ಮೂಲಕ ಕಬ್ಬು ಬೆಳೆಗಾರರಿಗೆ ಅನ್ಯಾಯ ಮಾಡಲು ಹೊರಟಿರುವ ಕ್ರಮ ಸರಿಯಿಲ್ಲ, ಜೊತೆಗೆ ದಕ್ಷಿಣ ಕರ್ನಾಟಕ ರಾಜ್ಯದಲ್ಲೂ ಬೆಲೆ ನಿಗದಿಪಡಿಸಲು ಮೀನಾಮೇಷ ಎಣಿಸುತ್ತಿರುವುದು ಖಂಡನೀಯ ಎಂದರು.