ಸದಾ ಮುಖ್ಯಮಂತ್ರಿ ಸಿದ್ದರಾಮಯ್ಯರ ಹೆಸರು ಜಪಿಸುತ್ತಿದ್ದ ಶಾಸಕರು ಈಗ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಇದರಿಂದ ಸಾರ್ವಜನಿಕವಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಉಂಡ ಮನೆಗೆ ದ್ರೋಹ ಬಗೆದಿರುವ ಶಾಸಕರು ಮುಜುಗರ ಅನುಭವಿಸುವಂತಾಗಿದೆ ಎಂದು ಟೀಕಿಸಿದರು. ಜೆಡಿಎಸ್ ಮುಖಂಡರಾದ ವೆಂಕಟೇಶಪ್ಪ, ಬಿಸ್ಸೇಗೌಡ, ಚಂದ್ರೇಗೌಡ, ಶ್ರೀನಿವಾಸ್, ಚಂದ್ರಶೇಖರ್ ಹಾಜರಿದ್ದರು.