ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಬ್ಯಾಂಕ್‌ಗಳಿಗೆ ₹3 ಸಾವಿರ ಕೋಟಿ ಬಿಡುಗಡೆ

Last Updated 21 ನವೆಂಬರ್ 2017, 9:33 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯ ಸರ್ಕಾರವು ಘೋಷಿಸಿದ್ದ ರೈತರ ಸಾಲ ಮನ್ನಾ ಯೋಜನೆಗಾಗಿ ಈಗಾಗಲೇ ₹3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಸಹಕಾರ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಏರ್ಪಡಿಸಿದ್ದ 64ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಯೋಜನೆಗೆ ₹8 ಸಾವಿರ ಕೋಟಿ ಒದಗಿಸಬೇಕಿದ್ದು, 2018 ರ ಮಾರ್ಚ್‌ ಅಂತ್ಯದವರೆಗೂ ಸಹಕಾರಿ ಬ್ಯಾಂಕುಗಳಿಂದ ಬರುವ ಬಿಲ್‌ ಆಧರಿಸಿ ಎಲ್ಲ ಹಣವನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು. ಸಾಲ ಮನ್ನಾ ಯೋಜನೆಯಿಂದ ಹಿಂದುಳಿದ, ಪರಿಶಿಷ್ಟ ವರ್ಗ ಹಾಗೂ ಎಲ್ಲ ಬಡ ರೈತರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT