ಉಡುಪಿ: ಇದೇ 24ರಿಂದ ಆರಂಭವಾಗಿ ಮೂರು ದಿನಗಳ ಕಾಲ ನಡೆಯುವ ಧರ್ಮ ಸಂಸತ್ ಸಂತರ ಸಮ್ಮೇಳನಕ್ಕೆ ಸಿದ್ಧತೆ ಭರದಿಂದ ನಡೆಯುತ್ತಿದೆ. ಸಮ್ಮೇಳನದ ಬಗ್ಗೆ ಮಾಹಿತಿ ನೀಡುವ ಬ್ಯಾನರ್, ಜಾಹೀರಾತು ಫಲಕ ಗಳು, ಹೋರ್ಡಿಂಗ್ಸ್ ನಗರದಲ್ಲಿ ರಾರಾಜಿಸತೊಡಗಿವೆ. ಕಾರ್ಕಳ, ಕುಂದಾಪುರ ನಗರ ಹಾಗೂ ಗ್ರಾಮಗಳಲ್ಲಿ ಸಹ ಅಳವಡಿಸ ಲಾಗಿದೆ. ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಜನರಿಗೆ ಮಾಹಿತಿ ನೀಡಲು ಭಾರಿ ಸಂಖ್ಯೆಯಲ್ಲಿ ಪ್ರಚಾರ ಸಾಮಗ್ರಿ ಬಳಸಲಾಗುತ್ತಿದೆ.