ಶಶಿಕಲಾ ಹಾಗೂ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸೇರಿದ್ದ ಕಚೇರಿಗಳ ಮೇಲೆ ಇತ್ತೀಚೆಗೆ ದಾಳಿ ಮಾಡಿದ್ದ ಅಧಿಕಾರಿಗಳು, ₹ 1,430 ಕೋಟಿ ಮೌಲ್ಯದ ಅಘೋಷಿತ ಸಂಪತ್ತು ಪತ್ತೆ ಮಾಡಿದ್ದರು. ಈ ಸಂಬಂಧ ಶಶಿಕಲಾ ಅವರ ಹೇಳಿಕೆ ಪಡೆಯಲು ಮುಂದಾಗಿರುವ ಅಧಿಕಾರಿಗಳು, ಅವರ ವಿಚಾರಣೆಗೆ ಸಹಕಾರ ನೀಡುವಂತೆ ರಾಜ್ಯ ಕಾರಾಗೃಹಗಳ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.