ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ವಸೂಲಿ ಕಾಯ್ದೆ: ಶೀಘ್ರ ಸುಗ್ರೀವಾಜ್ಞೆ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ : ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ಸಂಹಿತೆಯಲ್ಲಿ ಕೆಲ ತಿದ್ದುಪಡಿ ತರಲು ಶೀಘ್ರದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕಂಪನಿ ವ್ಯವಹಾರಗಳ ಸಚಿವ ಅರುಣ್‌ ಜೇಟ್ಲಿ ಅವರು ಬುಧವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಲಮಿತಿಗೆ ಒಳಪಟ್ಟು ಬ್ಯಾಂಕ್‌ಗಳ ಸಾಲ ವಸೂಲಾತಿ ಪ್ರಕ್ರಿಯೆ ನಡೆಸಲು ಕಳೆದ ವರ್ಷದ ಡಿಸೆಂಬರ್‌ನಿಂದಲೇ ಈ ಸಂಹಿತೆ ಜಾರಿಗೆ ತರಲಾಗಿದೆ. ಕಂಪನಿ ವ್ಯವಹಾರ ಸಚಿವಾಲಯವು ಇದನ್ನು ಕಾರ್ಯಗತಗೊಳಿಸುತ್ತಿದೆ. ಈಗ ತರಲು ಹೊರಟಿರುವ ತಿದ್ದುಪಡಿಯ ವಿವರಗಳು ತಕ್ಷಣಕ್ಕೆ ತಿಳಿದು ಬಂದಿಲ್ಲ.

ಈ ಕಾಯ್ದೆಯ ವಿವಿಧ ವಿಷಯಗಳ ಬಗ್ಗೆ ಉದ್ಯಮ ವಲಯದಲ್ಲಿ ಕೇಳಿ ಬರುತ್ತಿರುವ ಕಳವಳದ ಕಾರಣಕ್ಕೆ ತಿದ್ದುಪಡಿ ತರಲಾಗುತ್ತಿದೆ. ಕೆಲ ಉದ್ದಿಮೆಗಳ ಪ್ರವರ್ತಕರು ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಉದ್ದಿಮೆ ಮೇಲೆ ಮತ್ತೆ ಹಿಡಿತ ಸಾಧಿಸಲು ಹವಣಿಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ಸಮಿತಿ ರಚನೆ: ಕಾಯ್ದೆ ಜಾರಿಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸಲಹೆ ನೀಡಲು ಸರ್ಕಾರ ಈಗಾಗಲೇ 14 ಸದಸ್ಯರ ಸಮಿತಿ ರಚಿಸಿದೆ. ಕಂಪನಿ ವ್ಯವಹಾರ ಕಾರ್ಯದರ್ಶಿ ಐ. ಶ್ರೀನಿವಾಸ್‌ ಅಧ್ಯಕ್ಷತೆಯಲ್ಲಿನ ಈ ಸಾಲ ವಸೂಲಾತಿ ಕಾಯ್ದೆ ಸಮಿತಿಯು ದಿವಾಳಿ ಸಂಹಿತೆ ಜಾರಿ ಕುರಿತು  ಮಾಹಿತಿ ಕಲೆ ಹಾಕುತ್ತಿದೆ.

ಸಾಲ ವಸೂಲಿಗೆ ಸಂಬಂಧಿಸಿದಂತೆ, ರಾಷ್ಟ್ರೀಯ ಕಂಪನಿ ಕಾಯ್ದೆ ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಮುಂದೆ ಈಗಾಗಲೇ 300 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ನ್ಯಾಯಮಂಡಳಿ ಸಮ್ಮತಿ ನೀಡಿದ ನಂತರವೇ ಸಾಲ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT