‘ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ 37 ಎಕರೆ ಅರಣ್ಯ ಭೂಮಿಯನ್ನು ಖಾಸಗಿಯವರು ಕಬಳಿಸಿದ್ದಾರೆ. ಈ ಬಗ್ಗೆ ಹಿಂದೆ ಕೇಳಿದ ಪ್ರಶ್ನೆಗೆ, ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಈ ಭೂಮಿ ಇದೆ ಎಂದು ಉತ್ತರ ನೀಡಲಾಗಿತ್ತು. ಇದೇ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ, ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲ, ಖಾಸಗಿಯವರಿಗೆ ಸೇರಿದ ಭೂಮಿ ಎಂದು ಉತ್ತರ ನೀಡಲಾಗಿದೆ. ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು, ನನ್ನ ಹಕ್ಕುಚ್ಯುತಿಯಾಗಿದೆ’ ಎಂದು ಮಂಜುನಾಥಗೌಡ ಹೇಳಿದರು.