ಗುವಾಹಟಿ: 'ಮನುಷ್ಯರು ಪಾಪ ಮಾಡಿದ್ದರೆ ಅವರಿಗೆ ಕ್ಯಾನ್ಸರ್ ಬರುತ್ತದೆ' -ಹೀಗೆ ಹೇಳಿದ್ದು ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಸರ್ಮಾ.
ಮಂಗಳವಾರ ಹೊಸತಾಗಿ ಉದ್ಯೋಗಕ್ಕೆ ಸೇರ್ಪಡೆಯಾದ ಶಾಲಾಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಪಾಪ. ದೇವರ ನ್ಯಾಯಾಲಯದಲ್ಲಿ ಯಾರೊಬ್ಬರಿಗೂ ಶಿಕ್ಷೆಯಾಗದೇ ಇರುವುದಿಲ್ಲ. ಕೆಲವರು ಕ್ಯಾನ್ಸರ್ಗೊಳಗಾಗುತ್ತಾರೆ, ಇನ್ನು ಕೆಲವರು ಅಪಘಾತದಲ್ಲಿ ಸಾವಿಗೀಡಾಗುತ್ತಾರೆ. ಇದೆಲ್ಲವೂ ಪಾಪದ ಫಲ ಎಂದಿದ್ದಾರೆ.