ಬೆಂಗಳೂರು, ಮಂಗಳೂರು, ಸಕಲೇಶಪುರದ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ರವಿವರ್ಮ ಅವರ ಸಾಹಸ ನಿರ್ದೇಶನವಿದೆ. ಎ. ವೆಂಕಟೇಶ್ ಮತ್ತು ಆರ್. ಸುಂದರ ಕಾಮರಾಜು ಬಂಡವಾಳ ಹೂಡಿದ್ದಾರೆ. ನಟ ಧ್ರುವ ಸರ್ಜಾ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿ ಸಹೋದರನ ಚಿತ್ರಕ್ಕೆ ಶುಭ ಹಾರೈಸಿದರು.