‘ರಾಜ್ಯದ ಎಲ್ಲ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ ನಡೆಸಬೇಕು. ಶುಲ್ಕ ವಿಧಿಸುವ ವಿಚಾರದಲ್ಲಿ ನ್ಯಾಯಯುತವಾಗಿಯೇ ನಡೆದುಕೊಳ್ಳಬೇಕು, ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಅವರಿಗೆ ತಿಳಿಸಬೇಕು’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದಾನ್ ಅವರು ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.