ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಾರಾ ಅನೂರಾಧ ಶೂನ್ಯ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಪ್ರೋತ್ಸಾಹ ಧನದಿಂದ ಒಂದು ಮಗುವಿಗೆ ವರ್ಷಕ್ಕೆ ಗರಿಷ್ಠ ₹ 450 ಸಿಗುತ್ತಿತ್ತು. ಈ ಮೊತ್ತವನ್ನು ವರ್ಷಾಂತ್ಯದಲ್ಲಿ ನೀಡುತ್ತಿದ್ದುದರಿಂದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡಿದಂತೆ ಆಗುತ್ತಿರಲಿಲ್ಲ.’ ‘ಹಾಗಾಗಿ ಈ ಕಾರ್ಯಕ್ರಮವನ್ನು ಮುಂದುವರೆಸುತ್ತಿಲ್ಲ’ ಎಂದು ಸಚಿವರು ತಿಳಿಸಿದ್ದಾರೆ.