ಮಹಾಲಕ್ಷ್ಮಿ ಲೇಔಟ್ನಲ್ಲಿ ಮೇ 11ರಂದು ವಿನಯ್ ಅವರ ಕಾರು ಅಡ್ಡಗಟ್ಟಿದ್ದ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಬಳಿಕ ಅಪಹರಣಕ್ಕೆ ಯತ್ನಿಸಿದ್ದರು. ಅವರಿಂದ ತಪ್ಪಿಸಿಕೊಂಡಿದ್ದ ವಿನಯ್, ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಮಲ್ಲೇಶ್ವರ ಉಪವಿಭಾಗದ ಎಸಿಪಿ ಎ.ಆರ್.ಬಡಿಗೇರ, ಸಂತೋಷ್ ಸೇರಿ 12 ಮಂದಿಯ ವಿರುದ್ಧ ಬುಧವಾರವಷ್ಟೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.