ಈ ಕುರಿತು ಮಾಹಿತಿ ನೀಡಿದ ಪಟ್ಟಣದ ಮುಖಂಡರಾದ ಸಿದ್ದರಾಮಪ್ಪ ಮನ್ಮಿ, ಸದಾಶಿವ ಮೇತ್ರಿ, ಚಂದು ಕರಜಗಿ, ‘ಪುರಸಭೆಯವರು ಸ್ಥಳಕ್ಕೆ ಭೇಟಿ ನೀಡಿ ಚರಂಡಿ ನೀರು ನೇರವಾಗಿ ಮುಂದೆ ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ಅದೇ ನೀರು ನಳದ ತಗ್ಗುಗಳಲ್ಲಿ ಬಂದು ಸೇರಿಕೊಳ್ಳುತ್ತಿರುವುದರಿಂದ ಅದೇ ನೀರನ್ನು ಕುಡಿಯುವಂತಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.