ಇದಕ್ಕೂ ಮುನ್ನ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸೇಠ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗಿರುವಷ್ಟು ಸೌಜನ್ಯ, ಸಮಯ, ಸಂಯಮ, ಶಿಕ್ಷಣ ಸಚಿವರಿಗಿಲ್ಲ. ನಾಡಗೀತೆ, ನಾಡಧ್ವಜದಂತೆಯೇ ನಮಗೆ ನಾಡ ಪಠ್ಯ ವ್ಯವಸ್ಥೆ ಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್ಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಗಳು ವಾರದಲ್ಲೇ ಉತ್ತರಿಸಿದರು. ಆದರೆ ಶಿಕ್ಷಣ ಸಚಿವರು ಸೌಜನ್ಯಕ್ಕಾದರೂ ಪ್ರತಿಕ್ರಿಯಿಸಿಲ್ಲ ಎಂದು ಬರಗೂರು ಹೇಳಿದ್ದಾರೆ