ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನ್ವೀರ್ ಸೇಠ್‍ ಉತ್ತಮ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ಅವರನ್ನು ಸಂಪುಟದಿಂದ ಕೈ ಬಿಡಿ

Last Updated 24 ನವೆಂಬರ್ 2017, 14:09 IST
ಅಕ್ಷರ ಗಾತ್ರ

ಮೈಸೂರು: ತನ್ವೀರ್ ಸೇಠ್ ಉತ್ತಮ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿಲ್ಲ. ಶಿಕ್ಷಣ ಖಾತೆಯನ್ನು ಬೇರೆಯವರಿಗೆ ವಹಿಸಿ. ಸಂಪುಟದಲ್ಲಿ ಸೇಠ್ ಅವರು ಇರಬಾರದು ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಚಂಪಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಬಾರದ ಹಾಗೂ ಸರಿಯಾಗಿ ಸ್ಪಂದಿಸದ ಸೇಠ್ ಅವರನ್ನು ಸಂಪುಟದಿಂದ ಕೈ ಬಿಡಿ ಎಂದಿದ್ದಾರೆ ಚಂಪಾ .

ಇದಕ್ಕೂ ಮುನ್ನ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸೇಠ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗಿರುವಷ್ಟು ಸೌಜನ್ಯ, ಸಮಯ, ಸಂಯಮ, ಶಿಕ್ಷಣ ಸಚಿವರಿಗಿಲ್ಲ. ನಾಡಗೀತೆ, ನಾಡಧ್ವಜದಂತೆಯೇ ನಮಗೆ ನಾಡ ಪಠ್ಯ ವ್ಯವಸ್ಥೆ ಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್‍ಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಗಳು ವಾರದಲ್ಲೇ ಉತ್ತರಿಸಿದರು. ಆದರೆ ಶಿಕ್ಷಣ ಸಚಿವರು ಸೌಜನ್ಯಕ್ಕಾದರೂ ಪ್ರತಿಕ್ರಿಯಿಸಿಲ್ಲ ಎಂದು ಬರಗೂರು ಹೇಳಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT