ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜೃಂಭಣೆಯ ಬ್ರಹ್ಮ ರಥೋತ್ಸವ

Last Updated 25 ನವೆಂಬರ್ 2017, 6:46 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಷಷ್ಠಿ ಹಬ್ಬದ ಅಂಗವಾಗಿ ನಗರದ ದೇವಾಂಗಪೇಟೆ ಬಡಾವಣೆಯಲ್ಲಿರುವ ಸುಬ್ರಹ್ಮಣೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ನಡೆಯಿತು. ಸುಬ್ರಹ್ಮಣ್ಯೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ದೇವಾಂಗಪೇಟೆಯ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.

ಬೆಳಿಗ್ಗೆ ಏಕವಾರ ರುದ್ರಾಭಿಷೇಕ, ಉರುಳು ಸೇವೆ ಹಾಗೂ ಮಹಾಮಂಗಳಾರತಿ ಸೇವೆ ಸಲ್ಲಿಸಿದ ನಂತರ ಉತ್ಸವ ಮೂರ್ತಿಯ ರಥೋತ್ಸವ ನಡೆಯಿತು. ನೂರಾರು ಭಕ್ತರುಗಳು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಸುತ್ತಲೂ ವಿದ್ಯುತ್ ದೀಪ ಹಾಗೂ ಹಸಿರು ತೋರಣದಿಂದ ಶೃಂಗರಿಸಲಾಗಿತ್ತು.

ಮುಖಂಡರಾದ ಡಾ. ಪರಮೇಶ್ವರಯ್ಯ, ಕೂಗಟಿ ಗೋಪಾಲ್, ನಿರಂಜನ್, ರವಿ, ವೀರಭದ್ರಪ್ರಸಾದ್, ಎಂ.ಎನ್. ಸುಬ್ರಹ್ಮಣ್ಯಂ, ಡಿ.ಷಣ್ಮುಗ, ಗಂಗಾಧರ್, ಶಿವಕುಮಾರ್, ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಎನ್. ಮಹೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT