ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.25 ರೊಳಗೆ ಮಾಲವಿ ಜಲಾಶಯಕ್ಕೆ ಚಾಲನೆ

Last Updated 27 ನವೆಂಬರ್ 2017, 6:28 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ಮಾಲವಿ ಜಲಾಶಯಕ್ಕೆ ಶಾಶ್ವತ ನೀರೊದಗಿಸುವ ಯೋಜನೆಗೆ ಡಿಸೆಂಬರ್ 25 ರೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ಕೊಡಿಸಲಾಗುವುದು ಎಂದು ಶಾಸಕ ಎಸ್.ಭೀಮಾನಾಯ್ಕ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಕುರುಬರ ಸಮಾಜ ಭಾನುವಾರ ಹಮ್ಮಿಕೊಂಡಿದ್ದ ಕನಕದಾಸರ 530ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು. ಯೋಜನೆಗೆ ಸರ್ಕಾರ ₹136ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಟೆಂಡರ್‌ಗೆ ಅರ್ಜಿ ಸಲ್ಲಿಸಲು ಡಿ.1 ಕೊನೆಯ ದಿನವಾಗಿದೆ ಎಂದರು.

ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬುಡ್ಡಿ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್ಟಿ) ವರ್ಗಕ್ಕೆ ಸೇರಿಸಬೇಕು. ಸಮಾಜದ ಪೀಠಾಧೀಶರ ನೇತೃತ್ವದಲ್ಲಿ ಹೋರಾಟ ರೂಪಿಸಿ, ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಕಾಗಿನೆಲೆ ಸಂಸ್ಥಾನ ಪೀಠದ ಗುರು ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಕನಕದಾಸರ ಭಾವಚಿತ್ರ ಮೆರವಣಿಗೆಯಲ್ಲಿ ಸೌಂಡ್‌ ಮ್ಯೂಸಿಕ್ ಬದಲಾಗಿ ಕನಕದಾಸರ ಸಾಹಿತ್ಯದ ಪುಸ್ತಕಗಳನ್ನು ವಿತರಿಸಬೇಕಿದೆ. ಸಮಾಜವನ್ನು ರೊಚ್ಚಿಗೆಬ್ಬಿಸುವ ಶಬ್ದಗಳ ಬಳಕೆಯನ್ನು ಕನಕಗುರು ಪೀಠ ಸಹಿಸುವುದಿಲ್ಲ. ದಾಸರು ತೊಡೆ ತಟ್ಟುವ ಸಂಸ್ಕೃತಿಯವರಲ್ಲ, ಅವರು ಪ್ರೀತಿಯಿಂದ ಸಮಾಜವನ್ನು ಕಟ್ಟಿದರು ಎಂದು ಮಾರ್ಮಿಕವಾಗಿ ನುಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷೆ ಸುಶೀಲಾ, ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಾನಾಯ್ಕ, ಸದಸ್ಯರಾದ ಕೋಗಳಿ ಶ್ಯಾಮಲಾ , ಸೊನ್ನದ ಪ್ರಭಾಕರ, ಸಿ.ಗೀತಾ, ಮುಖಂಡರಾದ ಕುರಿ ಶಿವಮೂರ್ತಿ, ಮುಟುಗನಹಳ್ಳಿ ಕೊಟ್ರೇಶ್, ಕನಕ ನೌಕರರ ಸಂಘದ ಅಧ್ಯಕ್ಷ ದೇವಪ್ಪ, ಎಪಿಎಂಸಿ ಅಧ್ಯಕ್ಷ ಅಳವಂಡಿ ವೀರಣ್ಣ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ.ಬಸವರಾಜ, ಮೈಲಾರಪ್ಪ, ಸದ್ಯೋಜಾತಪ್ಪ, ರಾಮಣ್ಣ, ಮೈಲಾರಪ್ಪ, ಆರ್.ವೆಂಕಟೇಶ, ಪರಶುರಾಮ, ಭರ್ಮಪ್ಪ, ವರದಾಪುರ ಕುಮಾರ, ಕನಕ ಯುವಸೇನೆ ಅಧ್ಯಕ್ಷ ದೊಡ್ಡಬಸಪ್ಪ, ಮೆಟ್ರಿಗೋಣೆಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪಾರಿ ಬಸವರಾಜ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಜಿ.ಪರಮೇಶ್ವರ್, ಪಿಡಬ್ಲ್ಯುಡಿ ಎಇಇ ಪ್ರಭಾಕರ ಶೆಟ್ಟಿ ಇದ್ದರು. ಇದಕ್ಕೂ ಮುನ್ನ ತಹಶೀಲ್ದಾರ್ ಕಚೇರಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನಕದಾಸರ ಭಾವಚಿತ್ರದ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT