ತಾಲ್ಲೂಕಿನಲ್ಲಿ ಕಳೆದ ವರ್ಷ 13 ಸಾವಿರ ಹೆಕ್ಟೇರ್ನಲ್ಲಿ ಗೋವಿನ ಜೋಳ ಬಿತ್ತನೆ ಮಾಡಲಾಗಿತ್ತು. ಆದರೆ ಸಕಾಲಕ್ಕೆ ಮಳೆಯಾಗದೆ ಇಳುವರಿ ಕಡಿಮೆಯಾಗಿತ್ತು. ಈ ವರ್ಷ ಮಳೆ ಕೊರತೆಯಾಗಬಹುದು ಎಂಬ ಕಾರಣಕ್ಕಾಗಿ ಮೆಕ್ಕೆಜೋಳಕ್ಕೆ ರೈತರೂ ಒಲವು ತೋರಿದರು. ಶೇಂಗಾ ಬಿತ್ತನೆ ಮಾಡದೆ ಮೆಕ್ಕೆಜೋಳದ ಬಿತ್ತಿದರು. 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಉತ್ತಮ ಫಸಲು ಬಂದಿದೆ. ಅದಕ್ಕೆ ತಕ್ಕಂತೆ ಬೆಲೆ ಸಿಕ್ಕರೆ ಸಾಲದ ಹೊರೆ ಕಡಿಮೆ ಮಾಡಿಕೊಳ್ಳಬಹುದು ಎಂಬ ರೈತರ ನಿರೀಕ್ಷೆ ಈಗ ಹುಸಿಯಾಗುತ್ತಿದೆ.