ಈ ಕುರಿತು ಪಟ್ಟಣ ಯೋಜನೆ ಮತ್ತು ಸುಧಾರಣೆಗಳ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ್ ಪ್ರೀತಂ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಆದರೆ, ಕೆಲವಡೆ ವಾಹನ ನಿಲುಗಡೆಗೆ ಅವಕಾಶವಿಲ್ಲದೆ ಇದ್ದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಿದೆ. ರಸ್ತೆಯಲ್ಲಿ ವಾಹನ ನಿಲ್ಲಿಸಿದರೆ ವಾಹನ ಸಂಚಾರಕ್ಕೂ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆಯು ಈ ಹಿಂದಿನ ಕೌನ್ಸಿಲ್ ಸಭೆಯಲ್ಲಿ ಎಲ್ಲ ಕಟ್ಟಡಗಳಲ್ಲಿ ವಾಹನ ನಿಲುಗಡೆಗೆ ನೆಲಮಾಳಿಗೆಯಲ್ಲಿ ಸೌಲಭ್ಯ ಕಲ್ಪಿಸಬೇಕು ಎಂದು ತೀರ್ಮಾನಿಸಿತ್ತು ಎಂದು ಉಲ್ಲೇಖಿಸಿದರು.