ಬೆಳೆ ಕಟಾವು ನಡೆಯುವ ಸಂದರ್ಭದಲ್ಲಿ ಕೃಷಿ, ಕಂದಾಯ, ಗ್ರಾಮೀಣ ಅಭಿವೃದ್ಧಿ ಹಾಗೂ ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ವಿಮೆಗೆ ಸಂಬಂಧಿಸಿದಂತೆ ಬೇಕಿರುವ ಛಾಯಾಚಿತ್ರಗಳನ್ನು ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಯಾವುದೇ ತರಹದ ಆಕ್ಷೇಪಣೆಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.