ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಗುಂಡಿಬಿದ್ದ ರಸ್ತೆಗಳು

Last Updated 28 ನವೆಂಬರ್ 2017, 6:45 IST
ಅಕ್ಷರ ಗಾತ್ರ

ಹನೂರು: ಪಟ್ಟಣದಲ್ಲಿ ಇತ್ತೀಚೆಗೆ ಮಧುವನಹಳ್ಳಿಯಿಂದ ಹನೂರು ಪಟ್ಟಣದವರೆಗೆ ಹಾಳಾಗಿದ್ದ ರಸ್ತೆಯನ್ನು ಜಲ್ಲಿಕಲ್ಲು ಹಾಕಿ ಗುಂಡಿ ಮುಚ್ಚುವ ಕಾಮಗಾರಿ ನಡೆಸಲಾಗಿತ್ತು.

ಆದರೆ, ಈ ಜಲ್ಲಿಕಲ್ಲುಗಳು ಸಹ ಕಿತ್ತುಹೋಗಿ ರಸ್ತೆಯಲ್ಲಿ ಪುನಃ ಗುಂಡಿಗಳು ಸೃಷ್ಟಿಯಾಗಿವೆ. ಈ ಗುಂಡಿಗಳು ಅಪಾಯಕ್ಕೆ ಆಹ್ವಾನ ಮಾಡಿಕೊಡುತ್ತಿವೆ. ಮಳೆ ಬಂದರೆ ಗುಂಡಿಯಲ್ಲಿ ನೀರು ತುಂಬಿಕೊಳ್ಳುತ್ತಿದೆ. ಇದರಿಂದ ವಾಹನ ಸವಾರರಿಗೆ ಗುಂಡಿಯಿರುವುದು ಅರಿವಿಗೆ ಬಾರದೆ ಬಿದ್ದು ಗಾಯಗೊಳ್ಳುತ್ತಿದ್ದಾರೆ.

ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಲು ಮುಂದಾಗಬೇಕು ಎಂದು ಶಾಗ್ಯ ಗ್ರಾಮದ ನಿವಾಸಿ ನಂದೀಶ್‌ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT