ಹನೂರು: ಪಟ್ಟಣದಲ್ಲಿ ಇತ್ತೀಚೆಗೆ ಮಧುವನಹಳ್ಳಿಯಿಂದ ಹನೂರು ಪಟ್ಟಣದವರೆಗೆ ಹಾಳಾಗಿದ್ದ ರಸ್ತೆಯನ್ನು ಜಲ್ಲಿಕಲ್ಲು ಹಾಕಿ ಗುಂಡಿ ಮುಚ್ಚುವ ಕಾಮಗಾರಿ ನಡೆಸಲಾಗಿತ್ತು.
ಆದರೆ, ಈ ಜಲ್ಲಿಕಲ್ಲುಗಳು ಸಹ ಕಿತ್ತುಹೋಗಿ ರಸ್ತೆಯಲ್ಲಿ ಪುನಃ ಗುಂಡಿಗಳು ಸೃಷ್ಟಿಯಾಗಿವೆ. ಈ ಗುಂಡಿಗಳು ಅಪಾಯಕ್ಕೆ ಆಹ್ವಾನ ಮಾಡಿಕೊಡುತ್ತಿವೆ. ಮಳೆ ಬಂದರೆ ಗುಂಡಿಯಲ್ಲಿ ನೀರು ತುಂಬಿಕೊಳ್ಳುತ್ತಿದೆ. ಇದರಿಂದ ವಾಹನ ಸವಾರರಿಗೆ ಗುಂಡಿಯಿರುವುದು ಅರಿವಿಗೆ ಬಾರದೆ ಬಿದ್ದು ಗಾಯಗೊಳ್ಳುತ್ತಿದ್ದಾರೆ.
ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಲು ಮುಂದಾಗಬೇಕು ಎಂದು ಶಾಗ್ಯ ಗ್ರಾಮದ ನಿವಾಸಿ ನಂದೀಶ್ ಒತ್ತಾಯಿಸಿದ್ದಾರೆ.