ದಯವಿಟ್ಟು ಆ ಕೆಲ್ಸಾ ಮಾಡ್ಸಪ್ಪಾ: ‘ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಮಹದಾಯಿ ವಿವಾದ ಇತ್ಯರ್ಥವಾಗಲು ಸಾಧ್ಯ. ಸಂಧಾನಕ್ಕಾಗಿ ಈಗಾಗಲೇ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸಾಕಷ್ಟು ಬಾರಿ ಪತ್ರ ಬರೆಯಲಾಗಿದೆ. ಆದರೆ, ಬಿಜೆಪಿಯವರು ಮುಂದೆ ಬರುತ್ತಿಲ್ಲ. ಮೂರು ವರ್ಷಗಳಿಂದ ಸುಮ್ಮನಿದ್ದ ಯಡಿಯೂರಪ್ಪ, ಈಗ ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸಿ, ನೀರು ಹರಿಸುವುದಾಗಿ ಹೇಳಿದ್ದಾರೆ’ ಎಂದ ಸಿದ್ದರಾಮಯ್ಯ, ‘ಯಡಿಯೂರಪ್ಪ ನಿನ್ನ ಕೈ ಮುಗಿತೀನಿ, ದಯವಿಟ್ಟು ಆ ಕೆಲ್ಸಾ ಮಾಡ್ಸಪ್ಪಾ’ ಎಂದು ತಿವಿದರು.