ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಸೋಮವಾರದಿಂದ 4 ದಿನಗಳ ಉಪವಾಸ ಸತ್ಯಾಗ್ರಹ ಮುಂದುವರಿಸಲು ನಿರ್ಧರಿಸಿದ್ದಾರೆ. ಈ ಕುರಿತು ತಹಶೀಲ್ದಾರ್ಗೆ ಲಿಖಿತ ಮಾಹಿತಿ ಸಲ್ಲಿಸಲು ಮುಂದಾದರೂ ಸ್ವೀಕರಿಸಲು ಅಧಿಕಾರಿಗಳು ನಿರಾಕರಿಸಿದರು ಎಂದು ಧರಣಿ ನಿರತರು ದೂರಿದರು. ಭೋವಿ ಸಮಾಜ ಸಂಘಟನೆ ತಾಲ್ಲೂಕು ಅಧ್ಯಕ್ಷ ಶರಣಪ್ಪ ಭೋವಿ, ಜಿಲ್ಲಾ ಅಧ್ಯಕ್ಷ ರಮೇಶ ಭೋವಿ ಇದ್ದರು.