ಕಲಬುರ್ಗಿ: ನಗರ ಹೊರವಲಯದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಬುಧವಾರ ಬೆಳಿಗ್ಗೆ ಮಾರಾಮಾರಿ ನಡೆದಿದ್ದು, ಮೊಗಲಪ್ಪ ಎಂಬುವರು ಗಾಯಗೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಹೊಡೆದಾಟ ನಡೆದಿದೆ. ಮಂಗಳೂರು ಮೂಲದ ಇಬ್ಬರು ಕೈದಿಗಳು ಹಲ್ಲೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನ ಕೈದಿಗಳು ಉಪಾಹಾರ ಸೇವಿಸುತ್ತಿದ್ದಾಗ ಮೊಗಲಪ್ಪ ಕೈಯಲ್ಲಿ ಚಪ್ಪಲಿ ಹಿಡಿದುಕೊಂಡು ಹೊರಟಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ನಡೆದಿದೆ. ಸದ್ಯ ಮೊಗಲಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ಮೂಲಗಳ ವಿವರಣೆ.