ಎಲ್ಲರ ಸಹಕಾರದಿಂದ ಸೂರು ನಿರ್ಮಾಣ
ರಸ್ತೆಯಲ್ಲಿ ಓಡಾಡುವ ಸಂದರ್ಭದಲ್ಲಿ ವೃದ್ಧೆ ಮಳೆಯಲ್ಲಿ ನೆನೆಯುತ್ತಾ ಕುಳಿತಿದ್ದ ದೃಶ್ಯ ಕಂಡು ವಿಚಾರ ಮಾಡಲಾಗಿ ಮನೆ ಇಲ್ಲ ಎಂಬ ಅಂಶ ಗಮನಕ್ಕೆ ಬಂತು. ನಾವೆಲ್ಲ ಸ್ನೇಹಿತರು ಸೇರಿ ಅಜ್ಜಿಗೊಂದು ಮನೆ ಕಟ್ಟಿಕೊಡುವ ಮೂಲಕ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಗರ್ಭಿತವಾಗಿ ಆಚರಿಸುವ ತೀರ್ಮಾನಕ್ಕೆ ಬಂದೆವು. ಕೆಲಸ ಪ್ರಾರಂಭಿಸಿದ ನಂತರ ಸ್ನೇಹಿತರು ಒಂದಲ್ಲ ಒಂದು ರೀತಿ ಸಹಾಯ ಮಾಡಿದ ಕಾರಣ ಅಜ್ಜಿಗೊಂದು ವ್ಯವಸ್ಥಿತವಾದ ಮನೆ ನಿರ್ಮಿಸಲು ಸಾಧ್ಯವಾಯಿತು.
–ರವಿಕುಮಾರ್, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ