ನಾಡ ಗುಡ್ಡೇಅಂಗಡಿ ನಿವಾಸಿ ಮಾಜಿ ಸೈನಿಕ ವೆನೆಸಿಸ್ ಪಿರೇರಾ ದಂಪತಿಯನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ಹಿಂದೆ ಸೈನಿಕರ ಜೀವನ ದುಸ್ತರವಾಗಿತ್ತು. ಶಸ್ತ್ರಾಸ್ತ್ರಗಳ ಕೊರತೆ ಇತ್ತು. ಆದರೆ, ಈಗ ನಮ್ಮ ದೇಶದ ಮೂರು ಸೇನೆಗಳು ಸದೃಢವಾಗಿದ್ದು, ಶತ್ರುರಾಷ್ಟ್ರಗಳ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸುವ ತಾಕತ್ತು ಅವುಗಳಿಗಿದೆ. ಸೈನಿಕರ ಕುರಿತಾಗಿ ಪ್ರತಿಯೊಬ್ಬರಿಗೂ ಹೆಮ್ಮೆ, ಅಭಿಮಾನ, ಗೌರವ ಇರಬೇಕು. ಆಗ ಗಡಿಯಲ್ಲಿ ತಮ್ಮ ಜೀವವನ್ನು ಒತ್ತೆಯಿರಿಸಿ ನಮ್ಮನ್ನು ಕಾಯುವ ಯೋಧರಿಗೆ ಕೆಲಸ ಮಾಡಲು ಇನ್ನಷ್ಟು ಹುಮ್ಮಸ್ಸು, ಉತ್ಸಾಹ ಬರುತ್ತದೆ’ ಎಂದರು.