ಇದೇ ಎಟಿಎಂಗೆ ಹಣ ನಗದೀಕರಿಸಲು ಕಾಪು ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಲಕ್ಷ್ಮಣ್ ಅವರ ಪುತ್ರ ಕೆ.ಮನೀಷ್ ಕುಮಾರ್ ತೆರಳಿದ್ದರು. ಈ ವೇಳೆ ₹ 10,000 ಅವರಿಗೆ ಸಿಕ್ಕಿತ್ತು. ಅದನ್ನು ಮನೀಷ್ ಕಾಪು ಪಿಎಸ್ಐ ನಿತ್ಯಾನಂದ ಗೌಡ ಅವರ ಬಳಿ ತಂದು ಕೊಟ್ಟಿದ್ದರು. ಹಣ ಕಳೆದು ಕೊಂಡವರ ವಿವರವನ್ನು ಬ್ಯಾಂಕಿಗೆ ಹೋಗಿ ಪಡೆದುಕೊಂಡ ಎಸ್ಐ ಅವರು, ತಾರನಾಥ್ ಕೋಟ್ಯಾನ್ ಅವರಿಗೆ ಸೋಮವಾರ ನೀಡಿದ್ದಾರೆ.