ಪ್ರಸಿದ್ಧ ಬಿದ್ದಾಟಂಡ ವಾಡೆಯ ನೂರಂಬಡ ಊರ್ ಮಂದ್ಗೆ ಇದೇ ರಸ್ತೆಯಲ್ಲಿ ಸಾಗಬೇಕಿದೆ. ಹುತ್ತರಿ ಹಬ್ಬದ ಕೋಲಾಟದಲ್ಲಿ ಇಲ್ಲಿ ಸಾವಿರಾರು ಮಂದಿ ಸೇರುತ್ತಾರೆ. ರಸ್ತೆ ದುರಸ್ತಿಗೆ ಸಂಬಂಧಿಸಿದವರು ಕ್ರಮ ಕೈಗೊಳ್ಳದಿದ್ದರೆ, ಮುಂದಿನ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬಿದ್ದಾಟಂಡ ಸಂಪತ್, ನೆಡುಮಂಡ ಕೃತಿ, ಅಚ್ಚಾಂಡಿರ ಸಾಬು ದೇವಯ್ಯ, ಬಿದ್ದಾಟಂಡ ಜಿನ್ನು ನಾಣಯ್ಯ, ಎಚ್ಚರಿಸಿದ್ದಾರೆ. ‘ಆಟೊ ಚಾಲಕರು ಕೂಡ ಈ ರಸ್ತೆಯಲ್ಲಿ ಪ್ರಯಾಣಿಸುತ್ತಿಲ್ಲಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥ ಬಿದ್ದಾಟಂಡ ಸಂಪತ್ ಒತ್ತಾಯಿಸಿದ್ದಾರೆ.